ಪ್ರತಿಭಾನ್ವಿತ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ 6ನೇ ತರಗತಿಯಿಂದ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ. ಉತ್ತಮ ಶಿಕ್ಷಣ ಪಡೆಯಲು ಆಸಕ್ತಿ ಇದ್ದರೂ ಆರ್ಥಿಕ ಸಮಸ್ಯೆಯಿಂದ ಹಿಂದೆ ಬೀಳುವ ವಿದ್ಯಾರ್ಥಿಗಳಿಗೆ ಇದು ಮಹತ್ವದ ಅವಕಾಶವಾಗಿದೆ.

ಈ ಯೋಜನೆಯಡಿ ಆಯಾ ಜಿಲ್ಲೆಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಜಿಲ್ಲೆಗೆ ನಿಗದಿಪಡಿಸಿದ ಗುರಿಗಳ ಪ್ರಕಾರ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ. ಶಾಲಾ ಶುಲ್ಕವನ್ನು ಸಮಾಜ ಕಲ್ಯಾಣ ಇಲಾಖೆಯೇ ನೇರವಾಗಿ ಪಾವತಿಸುತ್ತದೆ.

ದಿನಾಂಕ 15-04-2026 ರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೆಳಗಿನ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು:
https://swdservices.karnataka.gov.in/EducationPrestigious/home/register

ಅರ್ಜಿ ಸಲ್ಲಿಕೆ ಪ್ರಾರಂಭ : 15-04-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-05-2026
ಪ್ರವೇಶ ಪರೀಕ್ಷೆ (Entrance Eam) : 12-05-2026
ಫಲಿತಾಂಶ ಘೋಷಣೆ : 15-05-2026
ಕೌನ್ಸಿಲಿಂಗ್‌ ಮೂಲಕ ಆಯ್ಕೆ : 19-05-2026
ಶಾಲೆಗೆ ದಾಖಲಾಗಲು ಕೊನೆಯ ದಿನಾಂಕ : 30-05-2026

ಅರ್ಜಿಯನ್ನು ಸಲ್ಲಿಸಲು ಆಧಾರ್ ಸಂಖ್ಯೆ ಅಗತ್ಯವಿದ್ದು, ವಿದ್ಯಾರ್ಥಿಯ ವಿವರಗಳನ್ನು ಆಧಾರ್ ಮೂಲಕ ಪರಿಶೀಲಿಸಲು OTP ವೆರಿಫಿಕೇಶನ್ ಮಾಡಬೇಕಾಗುತ್ತದೆ. ಜೊತೆಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರದ RD ಸಂಖ್ಯೆ, ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷದೊಳಗಿರಬೇಕು ಹಾಗೂ ಹಿಂದಿನ ತರಗತಿಯ ಅಂಕಪಟ್ಟಿ ಅಗತ್ಯವಿರುತ್ತದೆ.

ಅರ್ಜಿಯನ್ನು ಸಲ್ಲಿಸಿದ ನಂತರ ಜಿಲ್ಲಾ ಮಟ್ಟದಲ್ಲಿ ಲಿಖಿತ ಪರೀಕ್ಷೆ ನಡೆಯುತ್ತದೆ. ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯುತ್ತದೆ. ಈ ಪ್ರಕ್ರಿಯೆಯನ್ನು ಸಮಾಜ ಕಲ್ಯಾಣ ಇಲಾಖೆಯ ಜಂಟಿ/ಉಪ ನಿರ್ದೇಶಕರು ಮೇಲ್ವಿಚಾರಣೆ ಮಾಡುತ್ತಾರೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಈಗಾಗಲೇ ಗುರುತಿಸಲಾದ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಪ್ರವೇಶ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ 12ನೇ ತರಗತಿ / 2ನೇ ಪಿಯುಸಿ ವರೆಗೆ ಸಂಪೂರ್ಣ ಉಚಿತ ಶಿಕ್ಷಣ ಕಲ್ಪಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಥವಾ ತಾಲೂಕು ಮಟ್ಟದ ಕಚೇರಿಯನ್ನು ಸಂಪರ್ಕಿಸಬಹುದು. ಸಹಾಯವಾಣಿ ಸಂಖ್ಯೆ: 9482300400.