ಪ್ರತಿಭಾನ್ವಿತ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ 6ನೇ ತರಗತಿಯಿಂದ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ. ಉತ್ತಮ ಶಿಕ್ಷಣ ಪಡೆಯಲು ಆಸಕ್ತಿ ಇದ್ದರೂ ಆರ್ಥಿಕ ಸಮಸ್ಯೆಯಿಂದ ಹಿಂದೆ ಬೀಳುವ ವಿದ್ಯಾರ್ಥಿಗಳಿಗೆ ಇದು ಮಹತ್ವದ ಅವಕಾಶವಾಗಿದೆ.
ಈ ಯೋಜನೆಯಡಿ ಆಯಾ ಜಿಲ್ಲೆಗಳಲ್ಲಿ ಲಿಖಿತ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ಜಿಲ್ಲೆಗೆ ನಿಗದಿಪಡಿಸಿದ ಗುರಿಗಳ ಪ್ರಕಾರ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಮಾಡಲಾಗುತ್ತದೆ.
ಆಯ್ಕೆಯಾದ ವಿದ್ಯಾರ್ಥಿಗಳು ಯಾವುದೇ ಶಾಲಾ ಶುಲ್ಕ ಪಾವತಿಸಬೇಕಾಗಿಲ್ಲ. ಶಾಲಾ ಶುಲ್ಕವನ್ನು ಸಮಾಜ ಕಲ್ಯಾಣ ಇಲಾಖೆಯೇ ನೇರವಾಗಿ ಪಾವತಿಸುತ್ತದೆ.
ಮುಖ್ಯ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ: 15-04-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-05-2026
ಪ್ರವೇಶ ಪರೀಕ್ಷೆ: 12-05-2026
ಫಲಿತಾಂಶ ಘೋಷಣೆ: 15-05-2026
ಕೌನ್ಸಿಲಿಂಗ್ ಮೂಲಕ ಆಯ್ಕೆ: 19-05-2026
ಶಾಲೆಗೆ ದಾಖಲಾಗಲು ಕೊನೆಯ ದಿನಾಂಕ: 30-05-2026
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
1. ವಿದ್ಯಾರ್ಥಿಯ ಆಧಾರ್ ಸಂಖ್ಯೆ
2. ಆಧಾರ್ OTP ಪರಿಶೀಲನೆ
3. ಜಾತಿ ಪ್ರಮಾಣಪತ್ರದ RD ಸಂಖ್ಯೆ
4. ಆದಾಯ ಪ್ರಮಾಣಪತ್ರದ RD ಸಂಖ್ಯೆ
5. ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷದೊಳಗಿರಬೇಕು
6. ಹಿಂದಿನ ತರಗತಿಯ ಅಂಕಪಟ್ಟಿ
ಅರ್ಜಿಯನ್ನು ಸಲ್ಲಿಸಿದ ನಂತರ ಜಿಲ್ಲಾ ಮಟ್ಟದಲ್ಲಿ ಲಿಖಿತ ಪರೀಕ್ಷೆ ನಡೆಯುತ್ತದೆ. ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯುತ್ತದೆ. ಈ ಪ್ರಕ್ರಿಯೆಯನ್ನು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು / ಉಪ ನಿರ್ದೇಶಕರು ಮೇಲ್ವಿಚಾರಣೆ ಮಾಡುತ್ತಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಈಗಾಗಲೇ ಗುರುತಿಸಲಾದ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಪ್ರವೇಶ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ 12ನೇ ತರಗತಿ / 2ನೇ ಪಿಯುಸಿ ವರೆಗೆ ಉಚಿತ ಶಿಕ್ಷಣ ಕಲ್ಪಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ಅಧಿಕೃತ ಲಿಂಕ್:
https://swdservices.karnataka.gov.in/EducationPrestigious/home/register
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಥವಾ ತಾಲೂಕು ಮಟ್ಟದ ಕಚೇರಿಯನ್ನು ಸಂಪರ್ಕಿಸಬಹುದು.
ಸಹಾಯವಾಣಿ ಸಂಖ್ಯೆ: 9482 300 400